ಭಾರೀ ಮಳೆಗೆ ಕಡಲು ಪ್ರಕ್ಷುಬ್ದ: ಕೇರಳದಲ್ಲಿ ಮೀನುಗಾರರಿಗೆ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿವೆ. ಮಳೆಯೊಂದಿಗೆ ಪ್ರಬಲ ಗಾಳಿ ಬೀಸುವ ಸಾಧ್ಯತೆಗಳೂ ಇರುವ ಹಿನ್ನೆಲೆಯಲ್ಲಿ ವ್ಯಾಪಕ ಎಚ್ಚರಿಕೆ ವಹಿಸಬೇಕು, ತಗ್ಗು ಪ್ರದೇಶದ ಜನತೆ ಎಚ್ಚರಿಕೆಯಿಂದ ಇರಬೇಕು, ಮುಖ್ಯವಾಗಿ ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದ ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆಯಿದ್ದು, ಮೀನುಗಾರಿಕೆಗೆ ಯಾವುದೇ ಮೀನುಗಾರರು ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕಾಸರಗೋಡು ಸೇರಿದಂತೆ ಕೇರಳದ ಬಹುತೇಕ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!