ಹೊಸದಿಗಂತ, ಮಡಿಕೇರಿ:
ಮಂಗಳವಾರ ಬೆಳಗ್ಗೆ ಗುಡ್ಡೆಹೊಸೂರಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗೆ ಸ್ಕೂಟರ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಸಿದ್ದಾಪುರ ನಿವಾಸಿ ಲಲಿತಾ (53) ಎಂದು ಗುರುತಿಸಲಾಗಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿಯ ಪುತ್ರಿ ಸಿಂಚನಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗುಡ್ಡೆಹೊಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತ್ತೂರಿನಿಂದ ಬರುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್. ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.