April 12, 2026
Sunday, April 12, 2026
spot_img

ಸರ್ಕಾರಿ ವೈದ್ಯಾಧಿಕಾರಿ, ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ವಿಧಾನಸಭೆಯಲ್ಲಿ ಆರೋಗ್ಯ ಸಚಿವರು ಕೊಟ್ಟ ಭರವಸೆ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ(ಕೆಜಿಎಂಒಎ) ಮತ್ತು ಇತರ ಆರೋಗ್ಯ ಇಲಾಖೆ ನೌಕರರ ಸಂಘಗಳು ಬುಧವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬೆನ್ನಲ್ಲೇ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭರವಸೆ ನೀಡಿದ್ದಾರೆ.

ರಾಜ್ಯಾದ್ಯಂತ ಕೆಜಿಎಂಒಎ ಮಾರ್ಚ್ 11 ರಿಂದ ಎಲ್ಲಾ ಹೊರರೋಗಿ ವಿಭಾಗ(ಒಪಿಡಿ)ದ ಸೇವೆಗಳನ್ನು ಬಂದ್ ಮಾಡುತ್ತಿದೆ.ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಮಾರ್ಚ್ 16 ರಿಂದ ವೈದ್ಯರು ತುರ್ತು ಸೇವೆಗಳು ಸೇರಿದಂತೆ ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ಬಹಿಷ್ಕರಿಸಲು ಯೋಜಿಸಿದ್ದಾರೆ.

ಇದರ ಬೆನ್ನಲ್ಲೇ ವಿಧಾನಸಭೆಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ನಾವು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಚರ್ಚಿಸಿದ್ದೇವೆ. ಅವರ ಬೇಡಿಕೆಗಳಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ವೃಂದ ಹಾಗೂ ನೇಮಕಾತಿ, ಜೇಷ್ಠತಾ ಪಟ್ಟಿ ಮತ್ತು ಕಳೆದ ಕೌನ್ಸೆಲಿಂಗ್‌ನಲ್ಲಿನ ವ್ಯತ್ಯಾಸಗಳು ಸೇರಿವೆ. ನಾವು ಅವುಗಳನ್ನು ಪರಿಹರಿಸಲು ಯೋಜಿಸಿದ್ದೇವೆ ಎಂದರು.

ಇಂದು ನಾವು ಮುಖ್ಯಮಂತ್ರಿಯೊಂದಿಗೆ ಸಭೆಗೆ ಅವರಿಗೆ ಕರೆದಿದ್ದೇವೆ. ಇಲಾಖೆ ಮತ್ತು ಮುಖ್ಯವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ಏನು ಮಾಡಬಹುದು ಎಂಬುದನ್ನು ಚರ್ಚಿಸಿ ಪರಿಹರಿಸುತ್ತೇವೆ. ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಎಂಬ ವಿಶ್ವಾಸವಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !