ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆದೂರಿರುವ ತೀವ್ರ ಬೇಸಿಗೆ ಮತ್ತು ನೀರಿನ ಅಭಾವವನ್ನು ನೀಗಿಸಲು ಕರ್ನಾಟಕ ಸರ್ಕಾರವು ಭರ್ಜರಿ ಕ್ರಮ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಟ್ಟು 45 ಕೋಟಿ ರೂಪಾಯಿಗಳ ತುರ್ತು ಅನುದಾನವನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ವಿಶೇಷ ಅನುದಾನವನ್ನು ಪ್ರಮುಖವಾಗಿ ಈ ಕೆಳಗಿನ ಕೆಲಸಗಳಿಗಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ:
ನೀರಿನ ತೀವ್ರ ಅಭಾವವಿರುವ ಹಳ್ಳಿಗಳಿಗೆ ಟ್ಯಾಂಕರ್ಗಳ ಮೂಲಕ ತುರ್ತಾಗಿ ನೀರು ತಲುಪಿಸುವುದು.
ಸರ್ಕಾರಿ ಮೂಲಗಳಲ್ಲಿ ನೀರು ಬತ್ತಿ ಹೋದ ಸಂದರ್ಭದಲ್ಲಿ, ಖಾಸಗಿ ವ್ಯಕ್ತಿಗಳ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರಿಗೆ ನೀರು ಒದಗಿಸುವುದು.
ಸರ್ಕಾರವು ಜಿಲ್ಲೆಗಳ ಅವಶ್ಯಕತೆಗೆ ಅನುಗುಣವಾಗಿ ಅನುದಾನವನ್ನು ಹಂಚಿಕೆ ಮಾಡಿದೆ. ಅದರ ಪಟ್ಟಿ ಈ ಕೆಳಗಿನಂತಿದೆ:
| ಅನುದಾನದ ಮೊತ್ತ | ಜಿಲ್ಲೆಗಳು |
| ₹2 ಕೋಟಿ | ಬೆಳಗಾವಿ, ಕಲಬುರಗಿ, ಕೋಲಾರ, ರಾಯಚೂರು, ರಾಮನಗರ, ಉಡುಪಿ |
| ₹1.5 ಕೋಟಿ | ಬಾಗಲಕೋಟೆ, ಬೆಂಗಳೂರು, ಬೆಂಗಳೂರು (ಗ್ರಾ), ಬೆಂಗಳೂರು (ನಗರ), ಬೀದರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಪ್ಪಳ, ಮೈಸೂರು, ಶಿವಮೊಗ್ಗ, ವಿಜಯನಗರ, ವಿಜಯಪುರ, ಯಾದಗಿರಿ |
| ₹1 ಕೋಟಿ | ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕೊಡಗು, ಮಂಡ್ಯ, ತುಮಕೂರು, ಉತ್ತರ ಕನ್ನಡ |
“ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ಹಣ ಬಿಡುಗಡೆ ಮಾಡಲಾಗಿದೆ. ಜಿಲ್ಲಾಡಳಿತಗಳು ಕೂಡಲೇ ಕಾರ್ಯಪ್ರವೃತ್ತರಾಗಿ ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ನೆರವಾಗಬೇಕು” ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.



