11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದ ರಾಜ್ಯಪಾಲರು: ವಿಶೇಷ ಅಧಿವೇಶನದ ಮೊರೆಹೋದ ಕೇರಳ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದಲ್ಲಿ ಸರ್ಕಾರ ಮತ್ತು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ನಡುವೆ ಶೀತಲ ಸಮರ ಮುಂದುವರಿದ್ದು,ಸರ್ಕಾರ ರವಾನಿಸಿದ್ದ 11 ಸುಗ್ರೀವಾಜ್ಞೆಗಳಿಗೆ ರಾಜ್ಯಪಾಲರು ಅನುಮೋದನೆ ನೀಡಲು ನಿರಾಕರಿದ್ದಾರೆ.

ಇದೀಗ ರಾಜ್ಯಪಾಲರ ಅಂಕಿತ ಸಿಗದ ಹಿನ್ನೆಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಇವುಗಳನ್ನು ಪಾಸ್​ ಮಾಡಿಕೊಳ್ಳಲೆಂದೇ​ ವಿಶೇಷ ಅಧಿವೇಶನ ಕರೆದಿದೆ.
ಎರಡು ದಿನಗಳ ಹಿಂದೆ ರಾಜ್ಯಪಾಲರ ಅಂಕಿತಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಗಳನ್ನು ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಯಾವುದೇ ದಾಖಲೆಗಳನ್ನು ಓದದೆ ಸಹಿ ಹಾಕಲು ನಿರಾಕರಿಸಿದ್ದರು. ಹೀಗಾಗಿಯೇ ಮರು ಪ್ರಕಟಣೆಯಾಗಬೇಕಿದ್ದ ಸುಗ್ರೀವಾಜ್ಞೆಗಳು ರದ್ದಾಗಿವೆ.

ಇದೀಗರಾಜ್ಯಪಾಲರಿಗೆ ಸೆಡ್ಡು ಹೊಡೆದಿರುವ ಪಿಣರಾಯಿ ಸರ್ಕಾರ ಸಚಿವ ಸಂಪುಟ ಸಭೆ ಕರೆದು, 10 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮಂಡಿಸಿ ಸದನದಲ್ಲೇ ಅಂಗೀಕಾರ ಪಡೆಯುವ ಉದ್ದೇಶ ಸರ್ಕಾರದ್ದು. 140 ಸದಸ್ಯ ಬಲದ ವಿಧಾನಸಭೆಯಲ್ಲಿ 99 ಸದಸ್ಯರು ಆಡಳಿತಾರೂಢ ಎಡಪಕ್ಷಗಳಿಗೆ ಸೇರಿದ್ದು, ಈ ಎಲ್ಲ ಮಸೂದೆಗಳು ಕ್ಷಣಾರ್ಧದಲ್ಲಿ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಇತ್ತ, ಅಧಿವೇಶನ ನಡೆಸುವ ಬಗ್ಗೆ ರಾಜ್ಯಪಾಲರಿಗೆ 14 ದಿನಗಳು ಮುಂಚಿತವಾಗಿ ನೋಟಿಸ್​ ನೀಡಬೇಕು. ಹೀಗಾಗಿಯೇ ಸ್ಪೀಕರ್​ ಜೊತೆ ಚರ್ಚಿಸಿ ಸರ್ಕಾರ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!