ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರ ಪೂಜೆಗೆಂದು ತೆರಳಿದ್ದ ಸರ್ಕಾರಿ ವೈದ್ಯರೊಬ್ಬರು ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ಹಾಸನ ತಾಲೂಕಿನ ಖೋನಾಪುರ ಗ್ರಾಮದಲ್ಲಿ ನಡೆದಿದೆ.
ಚಂದ್ರಶೇಖರ್ (31) ಮೃತ ದುರ್ದೈವಿ. ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಉದ್ದೇಶದಿಂದ ಸ್ನಾನ ಮಾಡಲು ಹೇಮಾವತಿ ನದಿ ಹಿನ್ನೀರಿನಲ್ಲಿ ಇಳಿದಿದ್ದಾರೆ. ನದಿ ನೀರು ಸಂಪೂರ್ಣ ಕಡಿಮೆಯಾಗಿದೆ ಎಂದು ಆಳ ಅರಿಯದೆ ಇಳಿದ ಚಂದ್ರಶೇಖರ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತ ಚಂದ್ರಶೇಖರ್ ಹೊಳೆನರಸಿಪುರದ ಕೆರಗೋಡಿನಲ್ಲಿ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.