ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಈಗಿನ್ನು ನಿರಾಳವಾಗಿದ್ದ ಜನಾರ್ಧನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ಕಡೆಗೂ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅಸ್ತು ಎಂದಿದೆ. ಅಕ್ರಮ ಗಣಿಕಾರಿಗೆ ಹಣದಿಂದ ರೆಡ್ಡಿ 219 ಕಡೆ ಆಸ್ತಿ ಖರೀದಿಸಿದ್ದರು. ತೆಲಂಗಾಣ ರಾಜ್ಯದಲ್ಲಿ ಇರುವ ಈ ಆಸ್ತಿಗಳನ್ನು ಜಪ್ತಿ ಮಾಡಿ ಎಂದು ಸರ್ಕಾರಕ್ಕೆ ಸಿಬಿಐ ಮನವಿ ಮಾಡಿತ್ತು.
ಈ ವಿಷಯ ತಿಳಿಯುತ್ತಿದ್ದಂತೆ ರೆಡ್ಡಿ ಆಸ್ತಿಯನ್ನು ಮಾರಲು ಯತ್ನಿಸಿದ್ದರು.