ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಕ್ರಿಶ್ಚಿಯನ್ ಸಮುದಾಯದ ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ರಜಾ ದಿನ ರದ್ದುಗೊಳಿಸಿ ಕೆಲಸ ಮಾಡುವಂತೆ ಸೂಚಿಸಲಾಗಿದೆ ಅನ್ನೋ ವಿವಾದ ಸಂಚಲನ ಸೃಷ್ಟಿಸಿತ್ತು. ಈ ವಿವಾದ ಜೋರಾಗುತ್ತಿದ್ದಂತೆ ಬಿಜೆಪಿ ಸಂಸದ ಪ್ರಕಾಶ್ ಜಾವೇಡಕರ್ ಸ್ಪಷ್ಟನೆ ನೀಡಿದ್ದಾರೆ.
ಮಾರ್ಚ್ 29ರ ಗುಡ್ ಫ್ರೈಡೇ ಹಾಗೂ ಮಾರ್ಚ್ 31ರ ಈಸ್ಟರ್ ದಿನಕ್ಕೆ ರಜೆ ಘೋಷಿಸಲಾಗಿದೆ. ಈ ಕುರಿತು ಮಣಿಪುರ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಜಾವಡೇಕರ್ ಹೇಳಿದ್ದಾರೆ.
ಪ್ರಕಾಶ್ ಜಾವೇಡಕರ್ ಈ ಕುರಿತು ಟ್ವೀಟ್ ಮಾಡಿ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ. ಮಾರ್ಚ್ 29ರ ಗುಡ್ ಫ್ರೈಡೇ ಹಾಗೂ ಭಾನುವಾರ ಮಾರ್ಚ್ 31ರ ಈಸ್ಟರ್ ದಿನಕ್ಕೆ ರಜೆ ಎಂದು ಮಣಿಪುರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ ಕಾಂಗ್ರೆಸ್ಗೆ ಹೇಳಲು ಯಾವುದೇ ವಿಷಯವಿಲ್ಲ. ಹೀಗಾಗಿ ತಪ್ಪು ಮಾಹಿತಿಯನ್ನು ಜನರಿಗೆ ನೀಡುತ್ತಿದೆ. ಕಾಂಗ್ರೆಸ್ ಹಾಗೂ ಕಮ್ಯೂನಿಸ್ಟರ್ ಯಾವತ್ತು ಹಮಾಸ್ ಉಗ್ರರ ದಾಳಿ ಹಾಗೂ ರಷ್ಯಾ ಮೇಲಿನ ಉಗ್ರರ ದಾಳಿಯನ್ನು ಖಂಡಿಸುತ್ತದೆ ಎಂದು ಜಾವೇಡಕರ್ ಪ್ರಶ್ನಿಸಿದ್ದಾರೆ.
Manipur Government has issued notification that tomorrow 29th Good Friday and 31 Easter Sunday will be holiday.
Congress has no issues. Therefore they are raking up falsehood..
Congress and communist should now tell when they will condemn Hamas attack and terror attack in…— Prakash Javadekar (Modi Ka Parivar) (@PrakashJavdekar) March 28, 2024
ಮಣಿಪುರ ಸರ್ಕಾರ ಮಾರ್ಚ್ 30 ಹಾಗೂ 31ರಂದು ರಜೆ ಇಲ್ಲ, ಎಲ್ಲಾ ಸರ್ಕಾರಿ ಕಚೇರಿಗಳು ಕೆಲಸ ಮಾಡಬೇಕು. ಪ್ರಸಕ್ತ ಆರ್ಥಿಕ ವರ್ಷದ ಕೊನೆಯ ದಿನ ಕೆಲಸ ಕಡ್ಡಾಯವಾಗಿದೆ ಎಂದು ಅಧಿಸೂಚನೆ ಹೊರಡಿಲಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ನಾಯಕ ಶಶಿ ತರೂರ್, ಮಣಿಪುರ ಬಿಜೆಪಿ ಸರ್ಕಾರದ ನಿರ್ಧಾರ ನಿಜಕ್ಕೂ ಆಘಾತ ತಂದಿದೆ. ಭಾರತದಲ್ಲಿ ಎಲ್ಲಾ ಧರ್ಮಗಳ ನಂಬಿಕೆಗೆ ಸಮಾನ ಗೌರವವಿದೆ. ಪ್ರತಿಯೊಬ್ಬರ ಆಚರಣೆಗಳನ್ನು ಗೌರವಿಸಲಾಗುತ್ತದೆ. ಆದರಲ್ಲೂ ಆಯಾ ಸಮುದಾಯದ ವಿಶೇಷ ದಿನಗಳು ಪವಿತ್ರ ದಿನವಾಗಿ ಆಚರಿಸಲಾಗುತ್ತದೆ. ಇದನ್ನು ಗೌರವಿಸಬೇಕು. ಆದರೆ ಈಗ ಹೊರಬಂದಿರುವ ನಿರ್ಧಾರಗಳು ಆತಂಕಕಾರಿ ಹಾಗೂ ಆಘಾತ ತರುತ್ತಿದೆ ಎಂದು ಶಶಿ ತರೂರ್ ಹೇಳಿದ್ದರು. ಈ ವಿವಾದ ಹೆಚ್ಚಾಗುತ್ತಿದ್ದಂತೆ ಇದೀಗ ಪ್ರಕಾಶ್ ಜಾವೇಡಕರ್ ಸ್ಪಷ್ಟನೆ ನೀಡಿದ್ದಾರೆ.