ಸರಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸುತ್ತೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ಜಾತಿ ಗಣತಿ ವರದಿಯು (Caste Census Report) ರಾಜ್ಯ ಸರ್ಕಾರದ ಕಾಂಗ್ರೆಸ್ ಶಾಸಕರಲ್ಲಿ ಒಡಕು ಮೂಡಿಸಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲಿಂಗಾಯತರು ಮತ್ತು ಒಕ್ಕಲಿಗರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ಸರ್ಕಾರವು ಇತರ ಹಿಂದುಳಿದ ವರ್ಗಗಳ ಆಯೋಗದಿಂದ (OBC) ವರದಿಯನ್ನು ಸ್ವೀಕರಿಸಲಿದೆ ಎಂದು ಹೇಳಿದ್ದಾರೆ.

ವಿಧಾನಸೌಧದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆಗೆ 162 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಸರ್ಕಾರ ವರದಿ ತರಿಸಿಕೊಂಡು ನಂತರ ತೀರ್ಮಾನಿಸಲಿದೆ ಎಂದರು.

ನಾವು ವರದಿ ತೆಗೆದುಕೊಳ್ಳಬೇಕು. ಅವರಿಗೆ (ವೊಕ್ಕಲಿಗರಿಗೆ) ಇರುವ ಅನುಮಾನಗಳು ವರದಿಯಲ್ಲಿವೆಯೇ ಇಲ್ಲವೇ ಎಂಬುದನ್ನು ನೋಡಬೇಕು. ನಾನು ವರದಿಯನ್ನು ನೋಡಿಲ್ಲ. ನಾನೇ ನೋಡದಿದ್ದರೆ ಬೇರೆಯವರು ಅದನ್ನು ಹೇಗೆ ನೋಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಜಯಪ್ರಕಾಶ್ ಹೆಗ್ಡೆ (ಒಬಿಸಿ ಆಯೋಗದ ಅಧ್ಯಕ್ಷ) ನನ್ನನ್ನು ಭೇಟಿ ಮಾಡಿದ್ದರು. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವುದಾಗಿ ತಿಳಿಸಿದರು. ಅವರು ವರದಿ ಸಲ್ಲಿಸುವವರೆಗೂ ಅವರ ಸೇವಾವಧಿಯನ್ನು ವಿಸ್ತರಿಸುತ್ತೇವೆ ಎಂದು ಹೇಳಿದ್ದೆ. ಜನವರಿಯೊಳಗೆ ಸಲ್ಲಿಸುವಂತೆ ಹೇಳಿದ್ದೇನೆ’ ಎಂದು ಸಿಎಂ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ವರದಿಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಇಬ್ಬರ ನಡುವೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here