ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗದ ನಡುವೆ ಏರ್ಪಡಿಸಲಾಗಿರುವ ಕುಟುಂಬವಾರು ಟೆನ್ನಿಸ್ ಬಾಲ್ ಕ್ರಿಕೆಟ್ ಹಬ್ಬ ‘ಕುಟುಂಬ-2022’ ಗೆ ಚಾಲನೆ ನೀಡಲಾಯಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಿರಿಯರು, ಕೊಡಗು ಗೌಡ ವಿದ್ಯಾ ಸಂಘದ ನಿರ್ದೇಶಕ ಕುದುಪಜೆ ಬೋಜಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ವೇದಿಕೆಯ ಧ್ಯೇಯೋದ್ದೇಶದ ಬಗ್ಗೆ ಹೇಳಿದರಲ್ಲದೆ, ಪಂದ್ಯಾವಳಿಯ ಯಶಸ್ಸಿಗೆ ಸಹಕಾರ ನೀಡುವಂತೆ ಕೋರಿದರು. ವೇದಿಕೆಯಲ್ಲಿ ದಿಬ್ಬಣ ಮುಖ್ಯಸ್ಥ ಕುಲ್ಲಚೆಟ್ಟಿ ಕಾಶಿ ಪೂವಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ಕಡ್ಲೇರ ತುಳಸಿ ಮೋಹನ್, ಯುವ ವೇದಿಕೆ ಸ್ಥಾಪಕ ಅಧ್ಯಕ್ಷ ಪೊನ್ನಚನ ಮಧು ಸೋಮಣ್ಣ, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ವಕೀಲ ದುಗ್ಗಳ ಕಪಿಲ್’ಕುಮಾರ್, ವೇದಿಕೆ ಖಜಾಂಚಿ ಅಧ್ಯಕ್ಷ ಪರಿಚನ ಸತೀಶ್, ನಿರ್ದೇಶಕ ಪುದಿಯನೆರವನ ರಿಶಿತ್ ಮಾದಯ್ಯ, ಕುಟ್ಟನ ಪ್ರಶಾಂತ್ ಹಾಜರಿದ್ದರು.