ಹೊಸ ದಿಗಂತ ವರದಿ, ಮೈಸೂರು:
ಇತ್ತೀಚೆಗೆ ಅನಾರೋಗ್ಯ ಕಾರಣದಿಂದಾಗಿ ಮೊಮ್ಮಗಳು ಗೌರಿಯನ್ನು ಕಳೆದುಕೊಂಡಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.
ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಇಳಿವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು. ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ, ನಿಮ್ಮ ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ.
ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದಲ್ಲಿ ಸಾಂತ್ವಾನ ಹೇಳಿದ್ದಾರೆ.