ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಷುಲ್ಲಕ ಕಾರಣಕ್ಕೆ ಮೊಮ್ಮಗನೋರ್ವ ತಾತನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮೃತರನ್ನು ಸಿದ್ರಾಮಪ್ಪ ಕಾಮನ್ (75) ಎಂದು ಗುರುತಿಸಲಾಗಿದೆ. ಆಕಾಶ್ ಕಾಮನ್ ಕೊಲೆ ಆರೋಪಿ.
ಅಜ್ಜ ಸಿದ್ರಾಮಪ್ಪ ಅವಾಚ್ಯ ಶಬ್ದಗಳಿಂದ ತನ್ನ ತಾಯಿಗೆ ಎಲ್ಲರೆದುರು ಬೈದಿದ್ದಾರೆ ಎಂಬ ಕಾರಣಕ್ಕೆ ಆರೋಪಿ ಆಕಾಶ್, ಅಜ್ಜ ಸಿದ್ರಾಮಪ್ಪ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ವೃದ್ಧ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
ನರೋಣಾ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಆಕಾಶ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.