ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದು, ಕೇಂದ್ರದ ವಿರುದ್ಧ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ‘ಚಲೋ ದೆಹಲಿ’ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ಗುರುವಾರ ಕೇರಳ ಸರ್ಕಾರ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಿದ್ದು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಇಂದು ದೆಹಲಿಗೆ ಆಗಮಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ, ಅನುದಾನ, ಸಹಾಯಧನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ರಾಷ್ಟ್ರಮಟ್ಟದಲ್ಲಿ ಈ ವಿಚಾರವನ್ನು ಕೊಂಡೊಯ್ಯಲು ನಿರ್ಧರಿಸಿದ್ದು, ಪ್ರತಿಭಟನೆ ಆರಂಭಿಸಿವೆ. ಕೇರಳ ಸರ್ಕಾರದ ಪ್ರತಿಭಟನೆಗೆ ತಮಿಳುನಾಡು ಸರ್ಕಾರವೂ ಬೆಂಬಲ ನೀಡಿದೆ.