ರಾಜ್ಯದ ರಸ್ತೆಗಳ ಅಭಿವೃದ್ಧಿಗೆ ಅನುದಾನ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಭಿನಂದನೆ ತಿಳಿಸಿದ ಸಿಎಂ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್​ನಲ್ಲಿ ಕರ್ನಾಟಕದ ಬಹಳಷ್ಟು ಹೆದ್ದಾರಿ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕದ ವಿವಿಧ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ 3 ಸಾವಿರ ಕೋಟಿ ರೂಗೂ ಹೆಚ್ಚು ಅನುದಾನ ಪ್ರಕಟಿಸಿದ್ದಾರೆ.

ಬಿಜಾರಪುದ ಮಹಾರಾಷ್ಟ್ರ ಗಡಿಭಾಗದ ಕನಮಡಿ–ಬಿಜ್ಜರಗಿ–ತಿಕೋಟ ಸೆಕ್ಷನ್​ನಲ್ಲಿ ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196 ಕೋಟಿ ರೂ ಅನುದಾನ ನೀಡಲಾಗಿರುವ ವಿಚಾರವನ್ನು ತಿಳಿಸಿ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರ ಈ ಟ್ವೀಟ್​ಗೆ ಪ್ರತಿಕ್ರಿಯಿಸಿ, ವಿಶ್ವದರ್ಜೆಯ ಇನ್​ಫ್ರಾಸ್ಟ್ರಕ್ಚರ್ ಅನ್ನು ಒದಗಿಸಿರುವುದಕ್ಕೆ ಧನ್ಯವಾದ ಹೇಳಿದ್ದಾರೆ.

 

ಎಷ್ಟೆಷ್ಟು ಅನುದಾನ?

* ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್​ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣ: 196.05 ಕೋಟಿ ರೂ

* ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್​ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆ: 957.09 ಕೋಟಿ ರೂ

* ಬಾಗಲಕೋಟೆ ಜಿಲ್ಲೆ ರಾಹೆ-367: ಸರ್ಜಾಪುರದಿಂದ ಪಟ್ಟದಕಲ್ಲು ರಸ್ತೆ ಅಗಲೀಕರಣ ಯೋಜನೆ: 445.62 ಕೋಟಿ ರೂ

* ಕೊಪ್ಪಳ ಮತ್ತು ಗದಗ್​ನಲ್ಲಿ ರಾಹೆ-367ರ ಗಡ್ಡನಕೇರಿ ಸೆಕ್ಷನ್​ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆ: 333.96 ಕೋಟಿ ರೂ.

* ಮೈಸೂರು ಜಿಲ್ಲೆ ಯಲವಾಲ ಕೆಆರ್ ನಗರ ರಸ್ತೆ ಜಂಕ್ಷನ್​ನಲ್ಲಿ ನಾಲ್ಕು ಲೇನ್ ರಸ್ತೆ ನಿರ್ಮಾಣ ಯೋಜನೆ: 739.39 ಕೋಟಿ ರೂ.

* ಮೈಸೂರಿನಿಂದ ಕುಶಾಲನಗರದರೆಗಿನ ರಾಹೆ 275, ಗುಡ್ಡೆಹೊಸೂರು ಬಳಿ ನಾಲ್ಕು ಪಥ ರಸ್ತೆ ಅಗಲೀಕರಣ ಯೋಜನೆ: 909.86 ಕೋಟಿ ರೂ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!