ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ನಲ್ಲಿ ಕರ್ನಾಟಕದ ಬಹಳಷ್ಟು ಹೆದ್ದಾರಿ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕದ ವಿವಿಧ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ 3 ಸಾವಿರ ಕೋಟಿ ರೂಗೂ ಹೆಚ್ಚು ಅನುದಾನ ಪ್ರಕಟಿಸಿದ್ದಾರೆ.
ಬಿಜಾರಪುದ ಮಹಾರಾಷ್ಟ್ರ ಗಡಿಭಾಗದ ಕನಮಡಿ–ಬಿಜ್ಜರಗಿ–ತಿಕೋಟ ಸೆಕ್ಷನ್ನಲ್ಲಿ ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196 ಕೋಟಿ ರೂ ಅನುದಾನ ನೀಡಲಾಗಿರುವ ವಿಚಾರವನ್ನು ತಿಳಿಸಿ ಗಡ್ಕರಿ ಟ್ವೀಟ್ ಮಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರ ಈ ಟ್ವೀಟ್ಗೆ ಪ್ರತಿಕ್ರಿಯಿಸಿ, ವಿಶ್ವದರ್ಜೆಯ ಇನ್ಫ್ರಾಸ್ಟ್ರಕ್ಚರ್ ಅನ್ನು ಒದಗಿಸಿರುವುದಕ್ಕೆ ಧನ್ಯವಾದ ಹೇಳಿದ್ದಾರೆ.
Thanks to Union Minister for Road Transport & Highways @nitin_gadkari Ji,under the aegis of Hon’ble PM @narendramodi Ji, for world class infrastructure. Rs.196.05 Crores sanctioned for widening the 2 lane of Kanamadi – Bijjaragi – Tikota section (Maharashtra – Karnataka Border). https://t.co/fVTS2PKO6I
— Basavaraj S Bommai (@BSBommai) February 8, 2023
ಎಷ್ಟೆಷ್ಟು ಅನುದಾನ?
* ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣ: 196.05 ಕೋಟಿ ರೂ
* ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆ: 957.09 ಕೋಟಿ ರೂ
* ಬಾಗಲಕೋಟೆ ಜಿಲ್ಲೆ ರಾಹೆ-367: ಸರ್ಜಾಪುರದಿಂದ ಪಟ್ಟದಕಲ್ಲು ರಸ್ತೆ ಅಗಲೀಕರಣ ಯೋಜನೆ: 445.62 ಕೋಟಿ ರೂ
* ಕೊಪ್ಪಳ ಮತ್ತು ಗದಗ್ನಲ್ಲಿ ರಾಹೆ-367ರ ಗಡ್ಡನಕೇರಿ ಸೆಕ್ಷನ್ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆ: 333.96 ಕೋಟಿ ರೂ.
* ಮೈಸೂರು ಜಿಲ್ಲೆ ಯಲವಾಲ ಕೆಆರ್ ನಗರ ರಸ್ತೆ ಜಂಕ್ಷನ್ನಲ್ಲಿ ನಾಲ್ಕು ಲೇನ್ ರಸ್ತೆ ನಿರ್ಮಾಣ ಯೋಜನೆ: 739.39 ಕೋಟಿ ರೂ.
* ಮೈಸೂರಿನಿಂದ ಕುಶಾಲನಗರದರೆಗಿನ ರಾಹೆ 275, ಗುಡ್ಡೆಹೊಸೂರು ಬಳಿ ನಾಲ್ಕು ಪಥ ರಸ್ತೆ ಅಗಲೀಕರಣ ಯೋಜನೆ: 909.86 ಕೋಟಿ ರೂ