ಸ್ಥಳದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪರವಾನಗಿ ನೀಡಿ: ಚರಂತಿಮಠ

ಹೊಸದಿಗಂತ ವರದಿ ಬಾಗಲಕೋಟೆ:

ಗಣೇಶ ಉತ್ಸವ ಹಿನ್ನಲೆಯಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವ ಸ್ಥಳದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತಾರೆ, ಅಲ್ಲಿಗೆ ಅಧಿಕಾರಿಗಳು ಹೋಗಿ ಸ್ಥಳ ಪರಿಶೀಲನೆ ನಡೆಸಿ, ಸ್ಥಳದಲ್ಲೇ ಪರವಾನಗಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಬರುವ ಆಗಸ್ಟ್ 31ರಂದು ನಗರದ ಹಲವೆಡೆ ಗಣೇಶ ಮೂರ್ತಿಗಳನ್ನು ಗಣಪತಿ ಮಂಡಳಿಗಳು ಪ್ರತಿಷ್ಠಾಪಿಸುತ್ತಿದ್ದು, ಎಷ್ಟು ಅರ್ಜಿಗಳನ್ನು ನೀಡಲಾಗಿದೆ ಅವೆಲ್ಲವನ್ನು ಗಣನೆಗೆ ತೆಗೆದುಕೊಂಡು ಸ್ಥಳಕ್ಕೆ ಹೋಗಿ ಅಧಿಕಾರಿಗಳು ಸ್ಥಳ ಪರಿಶೀಲಿಸಲು ಸೂಚಿಸಿದ್ದೇನೆ. ಅಲ್ಲಿಯೇ ಪರವಾನಗಿ ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಡಿವೈಎಸ್ಪಿ, ಪೊಲೀಸ್ ಠಾಣಾಧಿಕಾರಿಗಳ ಜತೆ ಮಾತನಾಡಿದ್ದೇನೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಂಡಳಿಗಳಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!