ಮತದಾರರಿಗೆ ಕೃತಜ್ಞನಾಗಿದ್ದೇನೆ: ನಾಗಾಲ್ಯಾಂಡ್, ತ್ರಿಪುರಾ, ಮೇಘಾಲಯ ಜನರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ಚುನಾವಣೆ ಫಲಿತಾಂಶ ಪ್ರಕಟಣೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಗತಿ ಮತ್ತು ಸ್ಥಿರತೆಗೆ ಜನರು ಮತ ನೀಡಿದ್ದಾರೆಂದು ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಿಜೆಪಿಯನ್ನು ಬೆಂಬಲಿಸಿದ ಮೂರು ರಾಜ್ಯಗಳ ಮತದಾರರಿಗೆ ಕೃತಜ್ಞನಾಗಿದ್ದೇನೆ. ಮೇಘಾಲಯದ ಅಭಿವೃದ್ಧಿ ಪಥವನ್ನು ಹೆಚ್ಚಿಸಲು ಮತ್ತು ರಾಜ್ಯದ ಜನರನ್ನು ಸಬಲೀಕರಣಗೊಳಿಸುವತ್ತ ಗಮನ ಹರಿಸಲು ನಾವು ಶ್ರಮಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಧನ್ಯವಾದಗಳು ತ್ರಿಪುರಾ

‘ಧನ್ಯವಾದಗಳು ತ್ರಿಪುರಾ. ಇದು ಪ್ರಗತಿ ಮತ್ತು ಸ್ಥಿರತೆಗೆ ನೀಡಿದ ಮತವಾಗಿದೆ. ಬಿಜೆಪಿಯು ರಾಜ್ಯದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಕೆಲಸ ಮಾಡಲಿದೆ. ಎಲ್ಲಾ ತ್ರಿಪುರಾ ಬಿಜೆಪಿ ಕಾರ್ಯಕರ್ತರು ತಳಮಟ್ಟದಲ್ಲಿ ತಮ್ಮ ಅದ್ಭುತ ಪ್ರಯತ್ನಗಳಿಗಾಗಿ ನಾನು ಹೆಮ್ಮೆಪಡುತ್ತೇನೆ ಎಂದು ಹೇಳಿದರು.

 

ರಾಜ್ಯದ ಪ್ರಗತಿಗಾಗಿ ಕೆಲಸ

ನಾಗಾಲ್ಯಾಂಡ್ ಜನರಿಗೆ ಧನ್ಯವಾದ ತಿಳಿಸಿದ ಅವರು, ರಾಜ್ಯಕ್ಕೆ ಸೇವೆ ಸಲ್ಲಿಸಲು ಮತ್ತೊಂದು ಜನಾದೇಶದೊಂದಿಗೆ ಎನ್‌ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟವನ್ನು ಆಶೀರ್ವದಿಸಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ. ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಪ್ರಗತಿಗಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಈ ಫಲಿತಾಂಶವನ್ನು ಖಚಿತಪಡಿಸಿದ ನಮ್ಮ ಪಕ್ಷದ ಕಾರ್ಯಕರ್ತರ ಶ್ರಮಕ್ಕಾಗಿ ನಾನು ಶ್ಲಾಘಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!