ವರುಣನ ಕೃಪೆಗೆ ಹಸಿರಾದ ಹೊಲಗಳು: ಚಿಕ್ಕೋಡಿಯಲ್ಲಿ ರೈತರ ಸಂಭ್ರಮ

ಹೊಸದಿಗಂತ ವರದಿ ಬೆಳಗಾವಿ: ಚಿಕ್ಕೋಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ವರ್ಷಧಾರೆಯಿಂದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಕಳೆದ ಒಂದು ತಿಂಗಳಿನಿಂದ ಮಳೆ ಬೀಳದ್ದರಿಂದ ಬಿತ್ತನೆ ಮಾಡಿದ ಬೀಜ ಕಮರಿ ಹೋಗುವ ಸ್ಥಿತಿಯಲ್ಲಿತ್ತು. ಎರಡು ದಿನಗಳಿಂದ ಮಳೆ ಬೀಳುತ್ತಿರುವುದರಿಂದ ಎಲ್ಲೆಡೆ ಹಸಿರುಮಯ ವಾತಾವರಣ ಕಂಡು ಬರುತ್ತಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ, ದೂಧಗಂಗಾ, ವೇದಂಗಾ ಸೇರಿದಂತೆ ವಿವಿಧ ನದಿಗಳಲ್ಲಿ ಅಲ್ಪ ಪ್ರಮಾಣದ ನೀರು ಬಂದಿದ್ದು ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ಒಂದು ತಿಂಗಳಿನಿಂದ … Continue reading ವರುಣನ ಕೃಪೆಗೆ ಹಸಿರಾದ ಹೊಲಗಳು: ಚಿಕ್ಕೋಡಿಯಲ್ಲಿ ರೈತರ ಸಂಭ್ರಮ