ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಇಬ್ಬರು ವಲಸಿಗರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಗರದಲ್ಲಿ ಉಗ್ರರು ಗ್ರೆನೇಡ್ ಎಸೆದಿದ್ದು, ಇಬ್ಬರು ವಲಸಿಗರು ಮೃತಪಟ್ಟಿದ್ದಾರೆ.

ಶೋಪಿಯಾನ್‌ನ ಹಾರ್ಮೆನ್‌ನಲ್ಲಿ ದಾಳಿ ನಡೆದಿದ್ದು, ಉತ್ತರ ಪ್ರದೇಶದ ಕಾರ್ಮಿಕರಾದ ಮೊನೀಶ್ ಕುಮಾರ್, ರಾಮ್ ಸಾಗರ್ ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಗ್ರೆನೇಡ್ ಎಸೆದ ಇಮ್ರಾನ್ ಬಶೀರ್ ಗನಿ ಎಂಬಾತನನ್ನು ಶೋಪಿಯಾನ್ ಪೊಲೀಸರು ಬಂಧಿಸಿದ್ದಾರೆ. ಈತ ನಿಷೇಧಿತ ಲಷ್ಕರ್ ಎ ತೊಯ್ಬಾ ಸಂಘಟನೆಗೆ ಸೇರಿದವನಾಗಿದ್ದಾನೆ. ತನಿಖೆ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!