ಗ್ರೆನೇಡ್ ಲಾಂಚರ್‌ ಸ್ಫೋಟ: ಚುನಾವಣಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದ ವೇಳೆ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಬ್ಬರು ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್‌ (ಯುಬಿಜಿಎಲ್) ಸ್ಫೋಟಗೊಂಡು ಮೃತಪಟ್ಟಿದ್ದಾರೆ.

ಉಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಲ್ಗಾಮ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸ್ಫೋಟ ಸಂಬಂಧ ತಜ್ಞರ ತಂಡ ಹಾಗೂ ಭದ್ರತಾ ಸಿಬ್ಬಂದಿಯು ಮತಗಟ್ಟೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶವು ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ.

ಮೃತ ಯೋಧನನ್ನು ಸಿಆರ್‌ಪಿಎಫ್‌ನ 196ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ದೇವೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.

ಗಾಯಗೊಂಡಿದ್ದ ಅವರನ್ನು ಜಗದಲ್‌ಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!