ಇಂದಿನಿಂದ ಮನೆ ಯಜಮಾನಿಗೆ 2 ಸಾವಿರ ರೂ.ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರದ ಮತ್ತೊಂದು ಪ್ರಮುಖ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ದೊರೆಯಲಿದೆ.

ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡುವ ಯೋಜನೆ ಇದಾಗಿದ್ದು, ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈಗಾಗಲೇ ಯೋಜನೆ ಜಾರಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡಾಗಿದೆ. ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪತಿಯ ಆಧಾರ್ ​​ಕಾರ್ಡ್ ಕೂಡ ಬೇಕಾಗುತ್ತೆ. ಆಧಾರ್​ ಜತೆಗೆ ಮೊಬೈಲ್ ಕೊಂಡೊಯ್ದರೆ ಸಾಕು, ಬೇರೇನೂ ಬೇಡ. ಬೇರೆ ಖಾತೆಗೆ ಹಣ ಹಾಕಿ ಎನ್ನುವವರು ಪಾಸ್​​ಬುಕ್ ಜೆರಾಕ್ಸ್ ಕೊಡಬೇಕು.

ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ 8147500500 ಸಂಖ್ಯೆಗೆ ಪಡಿತರ ಚೀಟಿ ಸಂಖ್ಯೆಯನ್ನು SMS ಮಾಡಿ. ಕೂಡಲೇ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯವಿಲ್ಲ. ಗೊಂದಲವಿದ್ದರೆ 1902 ನಂಬರ್​ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ.

1 ಕೋಟಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳ ಮೊಬೈಲ್ ಸಂಖ್ಯೆ ಆಧಾರ್ ಹಾಗೂ ಬ್ಯಾಂಕ್ ಗೆ ಲಿಂಕ್ ಆಗಿದೆ. ಒಂದು ದಿನ ಒಂದು ಕೇಂದ್ರದಲ್ಲಿ 60 ಜನ ಅರ್ಜಿಯನ್ನ ಹಾಕಬಹುದು. ಗೊಂದಲ ಆಗಬಾರದು ಅಂತ 60 ಮಂದಿಗೆ ಮಾತ್ರ ಸೀಮಿತಗೊಳಿಸಿದ್ದೇವೆ. ಸುಮಾರು 11 ಸಾವಿರ ಸೇವಾ ಕೇಂದ್ರಗಳು ರಾಜ್ಯದಲ್ಲಿದ್ದು, ಒಂದು ದಿನಕ್ಕೆ 60 ಅಂದರೆ ಒಟ್ಟಾರೆ 6.5 ಲಕ್ಷ ಜನರು ಈ ಸೇವೆಯನ್ನ ಪಡೆದುಕೊಳ್ಳುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!