ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವೇದಾಂತ್ ನಾವಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ.
ವೇದಾಂತ್ ಗೃಹಲಕ್ಷ್ಮಿ ಯೋಜನೆಯ ಹಣವು ವಿದ್ಯಾಭ್ಯಾಸಕ್ಕೆ ನೆರವಾಯಿತು ಎಂದು ಹೇಳಿರುವ ವಿಡಿಯೋವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೇರ್ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕಿರು ವಿಡಿಯೋ ಹಂಚಿಕೊಂಡಿರುವ ಕರ್ನಾಟಕ ಕಾಂಗ್ರೆಸ್, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ವಿವಿಧ ರೀತಿಯಲ್ಲಿ ಆಸರೆಯಾಗಿರುವುದನ್ನು ಕಂಡು ಸಾರ್ಥಕ ಭಾವ ಮೂಡುತ್ತಿದೆ. ಕೇವಲ ಹತ್ತು ತಿಂಗಳಲ್ಲಿ ನಮ್ಮ ಯೋಜನೆಯಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಪರಿಣಾಮಕಾರಿ ಬದಲಾವಣೆ ತರುತ್ತಿರುವುದು ಹೆಮ್ಮೆಯ ಸಂಗತಿ ಎಂದಿದೆ.