ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮುಂಬರುವ ಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಮತದಾರರಿಗೆ ಹಲವಾರು ಭರವಸೆಗಳ ನೀಡಿದ್ದು, ಅಧಿಕಾರಕ್ಕೆ ಬಂದರೆ, ಕರ್ನಾಟಕದಂತೆಯೇ ಛತ್ತೀಸ್ಗಢದಲ್ಲೂ ‘ಗೃಹ ಲಕ್ಷ್ಮಿ ಯೋಜನೆ’ ಜಾರಿಗೆ ತರುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ.
ಈ ಯೋಜನೆಯು ಪ್ರತಿ ವರ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 15,000 ರೂ. ಠೇವಣಿ ಮಾಡುವ ಗುರಿ ಹೊಂದಿದೆ. ಹೆಚ್ಚುವರಿಯಾಗಿ, ಪ್ರತಿ ಎಲ್ಪಿಜಿ ಸಿಲಿಂಡರ್ ಗೆ 500 ರೂ. ಸಬ್ಸಿಡಿ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ರೈತರು, ಕಾರ್ಮಿಕರು, ಮಹಿಳೆಯರು, ಬುಡಕಟ್ಟು ಸಮುದಾಯಗಳು, ದಲಿತರು ಮತ್ತು ಬಡವರ ಕಲ್ಯಾಣವನ್ನು ಉತ್ತೇಜಿಸಲು ಬೆಂಬಲ ನೀಡಲಾಗುವುದು ಎಂದು ಪ್ರಿಯಾಂಕಾ ಹೇಳಿದ್ದಾರೆ.