ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಸುಳಿವು ಕೊಟ್ಟಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಇದೀಗ ಯುಟರ್ನ್ ಹೊಡೆದಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ. ಶಕ್ತಿ ಯೋಜನೆಯಲ್ಲೂ ಯಾವುದೇ ಪರಿಷ್ಕರಣೆ ಇಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರವನ್ನ ಷಡ್ಯಂತ್ರದಿಂದ ಕೆಡವಲು ಯಾರ ಹಣೆಯಲ್ಲೂ ಬರೆದಿಲ್ಲ. ಇನ್ನೂ ಎಂಟೂವರೆ ವರ್ಷ ನಮ್ಮದೇ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ಡಿಕೆಶಿ ಹೇಳಿದ್ದೇನು?
ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್ಗೆ ಹಣ ಕೊಡೋಕೆ ಸಿದ್ಧವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಅಂತ ಅನೇಕರು ನನಗೆ ಮೆಸೇಜ್ ಹಾಕಿದ್ದಾರೆ ಎಂದಿದ್ದರು.