ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ಯಾರಂಟಿ ಹಣ ಬಿಡುಗಡೆ ಆಗದೇ ಇರೋ ಬಗ್ಗೆ ಗೊತ್ತಿಲ್ಲ. ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

5 ತಿಂಗಳಿನಿಂದ ಅನ್ನಭಾಗ್ಯದ ಹಣ 3 ತಿಂಗಳಿಂದ ಗೃಹಲಕ್ಷ್ಮಿ ಹಣ ಬಾರದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹಣ ಪಾವತಿ ಮಾಡದೇ ಹೋದರೇ ಪಾವತಿ ಮಾಡುತ್ತೇವೆ. ಆದರೇ ಗ್ಯಾರಂಟಿ ನಿಲ್ಲಿಸೋ ಪ್ರಶ್ನೆಯೇ ಇಲ್ಲ ಎಂದರು.

ಹಣ ಬಿಡುಗಡೆ ಪೆಂಡಿಂಗ್ ಇರುವ ಬಗ್ಗೆ ನನಗೆ ಗೊತ್ತಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಿಸುತ್ತೇನೆ ಎಂದು ಭರವಸೆ ಕೊಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!