ಗಣೇಶ ಹಬ್ಬಕ್ಕೆ ಗೈಡ್ ಲೈನ್ ಜಾರಿ: ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮದ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗಣೇಶ ಹಬ್ಬ ಸಮೀಪಿಸುತ್ತಿರುವಾಗ,ಬೆಂಗಳೂರಿನಲ್ಲಿ ಬಿಬಿಎಂಪಿ‌ ಹಲವು ನಿಯಮಗಳನ್ನು ಜಾರಿಗೆ ಮಾಡುವ ಚಿಂತನೆಯಲ್ಲಿದೆ. ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ವಿಧಿಸಲಾಗುತ್ತದೆ.

ಕೋರ್ಟ್ ಆದೇಶದಂತೆ ಪಿಓಪಿ ಗಣೇಶ ಮೂರ್ತಿಯನ್ನು ನಿಷೇಧಿಸಲಾಗಿದ್ದೂ, ವಾರ್ಡಿಗೆ ಒಂದೇ ಗಣಪತಿ ಸೇರಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿದಂತ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಈ ಬಾರಿಯೂ ಕಳೆದ ಬಾರಿ ಗಣೇಶ ಹಬ್ಬಕ್ಕೆ ವಿಧಿಸಲಾಗಿರುವಂತ ನಿಯಮಗಳನ್ನೇ ವಿಧಿಸಲಾಗುತ್ತಿದೆ. ಪಿಓಪಿ ಗಣೇಶ ಮೂರ್ತಿಗಳನ್ನು ಕೂರಿಸೋದಕ್ಕೆ ನಿಷೇಧ ಹೇರಲಾಗಿದೆ. ಒಂದು ವಾರ್ಡಿಗೆ ಒಂದೇ ಗಣಪತಿ ಕೂರಿಸಲು ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದರು.

ಪಿಒಪಿ ಗಣಪತಿಗಳನ್ನು ಯಾರೂ ತಯಾರಿಸಬಾರದು. ತಯಾರಿಸಿ ಮಾರಾಟ ಮಾಡಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗೆ ಸೇರಿ ಅಂತಹ ಅಂಗಡಿಗಳ ಮೇಲೆ ರೈಡ್ ಮಾಡಲಾಗುತ್ತದೆ ಎಂದರು.
ಬಿಬಿಎಂಪಿ ನಿಗದಿ ಪಡಿಸಿರುವಂತ ಜಾಗದಲ್ಲಿಯೇ ವಿಸರ್ಜನೆ ಮಾಡಬೇಕು. ಅದರ ಹೊರತಾಗಿ ಎಲ್ಲಿಯೂ ವಿಸರ್ಜಿಸುವಂತಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!