ಹೊಸದಿಗಂತ ವರದಿ, ಕಲಬುರಗಿ:
ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ನಲ್ಲಿ ಕಮಲ ಅರಳಿ ನಳನಳಿಸಿದ್ದು, ಬಿಜೆಪಿ ಚಾರಿತ್ರಿಕ ವಿಜಯ ಸಾಧಿಸಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ್ ತಿಳಿಸಿದರು.
ನಗರದ ಎಸ್ವಿಪಿ ವೃತ್ತದಲ್ಲಿ ಬಿಜೆಪಿ ಮುಖಂಡರು ಸೇರಿದಂತೆ ನೂರಾರು ಕಾಯ೯ಕತ೯ರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ವಿಜಯೋತ್ಸವ ಆಚರಿಸಿದರು.
ಕಾಂಗ್ರೆಸ್ ದೇಶದಿಂದ ಹಂತ ಹಂತವಾಗಿ ನೆಲಕಚ್ಚಿಕೊಳ್ಳುತ್ತಿದ್ದು,ಮುಂಬರುವ ರಾಜ್ಯ ವಿಧಾನ ಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ತನ್ನ ಅಸ್ತಿತ್ವವನ್ನು ಸಂಪೂರ್ಣ ಕಳೆದುಕೊಳ್ಳಲಿದೆ ಎಂದರು.
ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ,ಗ್ರಾಮಿಣ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಕುಡಾ ಅಧ್ಯಕ್ಷ ಅವಿನಾಶ ಕುಲಕರ್ಣಿ, ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ರಾಗವೇಂದ್ರ ಕುಲಕರ್ಣಿ ಕೋಗನೂರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.