ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ನೂರಕ್ಕೆ ನೂರು ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜನರು ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಲಿದ್ದಾರೆ. ಜನರು ಸುಳ್ಳು ಆರೋಪಗಳು ಹಾಗೂ ರಾಜಕೀಯ ಆರೋಪಗಳಿಗೆ ಬೆಲೆ ಕೊಡುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಎರಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರಧಾನಮಂತ್ರಿ ಮೋದಿ ಅವರ ನಾಯಕತ್ವಕ್ಕೆ ಇಡೀ ಭಾರತ, ವಿಶ್ವ ಬೆಂಬಲ ಕೊಡುತ್ತಿದೆ. ಹೀಗಾಗಿ ಗುಜರಾತ್ನಲ್ಲಿ 7ನೇ ಬಾರಿ ಗೆಲುವು ಸಾಧಿಸುತ್ತಿದ್ದೇವೆ ಎಂದರು. ಈ ಚುನಾವಣೆ ಫಲಿತಾಂಶ ಮುಂಬರುವ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಅಂತ ಭವಿಷ್ಯ ನುಡಿದರು.