ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಸಿನ್ಹಾ ವಘೇಲಾ ಭಾನುವಾರ ತಮ್ಮ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ರಾಜೀನಾಮೆ ಪತ್ರದಲ್ಲಿ ಪಕ್ಷದ ವಿರುದ್ಧ ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ, ಗುಂಪುಗಾರಿಕೆ ಬಗ್ಗೆ ದೂರಿರುವ ವಿಶ್ವನಾಥ್ ಸಿನ್ಹಾ ವಘೇಲಾ, 2016ರಿಂದ 2021ರವರೆಗೆ ಯಾವುದೇ ಹುದ್ದೆ ಪಡೆದಿದ್ದರೂ ಇದಕ್ಕೆ ಪ್ರತಿಯಾಗಿ ಪಕ್ಷಕ್ಕೆ 70 ಲಕ್ಷ ರೂ. ಭರಿಸಿದ್ದೇನೆ ಎಂದೂ ಆರೋಪಿಸಿದ್ದಾರೆ. ಅಲ್ಲದೇ, ತಮ್ಮ ಆರಾಧ್ಯ ದೈವವಾಗಿದ್ದ ಸ್ವಾತಂತ್ರ್ಯ ಹೋರಾಟಗಾರರನ್ನು ಈಗಿನ ಕಾಂಗ್ರೆಸ್ ಪಕ್ಷವು ಗೌರವಿಸುತ್ತಿಲ್ಲ. ಅವರ ಫೋಟೋಗಳು ಕೂಡ ಪಕ್ಷದ ಕಚೇರಿಯ ಗೋಡೆಗಳ ಮೇಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ಆಗಿ ಉಳಿದಿಲ್ಲ ಎಂದು ವಘೇಲಾ ದೂರಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ