ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾನವಾಪಿ ಮಸೀದಿಯ ವೀಡಿಯೋ ಚಿತ್ರೀಕರಣವು ಪೂರ್ಣಗೊಂಡಿದ್ದು ನಂದಿಯ ಎದುರಿನಲ್ಲಿರುವ ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದು ಪರ ವಕೀಲರು ಹೇಳಿದ್ದಾರೆ.
ಈ ಕುರಿತು ಇಂಡಿಯಾ ಟುಡೇ ಮಾಧ್ಯಮಕ್ಕೆ ವಕೀಲ ವಿಷ್ಣು ಜೈನ್ ಫೋನ್ ನಲ್ಲಿ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಶಿವಲಿಂಗ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅದರ ರಕ್ಷಣೆಗೆ ಸಿವಿಲ್ ಕೋರ್ಟ್ ಮೊರೆ ಹೋಗುವುದಾಗಿ ವಕೀಲರು ತಿಳಿಸಿದ್ದಾರೆ.
ದೆಹಲಿ ಮೂಲದ ಮಹಿಳೆಯರಾದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರ ಇಬ್ಬರು ಸೇರಿದಂತೆ ಒಟ್ಟೂ ಐದು ಮಂದಿ ಗ್ಯಾನವಾಪಿ ಮಸೀದಿಯ ಹೊರ ಗೋಡೆಗಳ ಮೇಲಿನ ಹಿಂದೂ ದೇವತೆಗಳ ವಿಗ್ರಹಗಳ ಮುಂದೆ ದೈನಂದಿನ ಪ್ರಾರ್ಥನೆಗೆ ಅನುಮತಿ ಕೋರಿ ನ್ಯಾಯಾಲಯದಲ್ಲಿಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿಯ ಜಾಗದಲ್ಲಿ ಹಿಂದು ಮಂದಿರದ ಅವಶೇಷಗಳ ಕುರಿತು ಸತ್ಯಾನ್ವೇಷಣೆ ನಡೆಸಲು ವಿಡಿಯೊ ಸಮೀಕ್ಷೆಗೆ ಆದೇಶ ನೀಡಿತ್ತು.