ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲಸ ಮುಗಿಸಿ ಮನೆಗೆ ಹೋಗಿ ಮಲಗಿದ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಮಲಗಿದ್ದ ರೀತಿಯಲ್ಲೇ ಸಾವನ್ನಪ್ಪಿದ್ದಾರೆ.
ಆನಂದ್ ಕುಮಾರ್ ಮೃತ ಎಎಸ್ಐ. ರಾತ್ರಿ ಪಾಳಿ ಕೆಲಸ ಮಾಡಿ ಮನೆಗೆ ತೆರಳಿ ಮಲಗಿದ್ದರು. ಅವರನ್ನು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಆನಂದ್ ಅವರು ನಾಗರಭಾವಿ ಬಳಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.