ಹೊಸದಿಗಂತ ವರದಿ,ವಿಜಯನಗರ:
ವಿಶ್ವಪ್ರಸಿದ್ಧ ಹಂಪಿ ಉತ್ಸವವನ್ನು ಜ.27, 28 ಹಾಗೂ 29 ಮೂರು ದಿನಗಳ ಕಾಲ ಆಯೋಜಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಶಿಲ್ಪಕಲಾ ಶಿಬಿರಕ್ಕೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಚಾಲನೆ ನೀಡಿದರು.
ಹಂಪಿಯ ಶ್ರೀ ವಿರೂಪಾಕ್ಷ ದೇವಸ್ಥಾನದ ರಥಬೀದಿ ಪಕ್ಕದ ಮೈದಾನದಲ್ಲಿ ಆಯೋಜಿಸಲಾದ ಶಿಬಿರಕ್ಕೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಬೃಹತ್ ಕಲ್ಲಿಗೆ ಉಳಿಪೆಟ್ಟು ಹಾಕುವ ಮೂಲಕ ಚಾಲನೆ ನೀಡಿ ಗಮನಸೆಳೆದರು.
ಜ.26 ರವೆರಗೂ ಶಿಬಿರ ನಡೆಯಲಿದ್ದು ಹೊಸಪೇಟೆ ಸೇರಿದಂತೆ ಕೊಲ್ಕತ್ತಾ, ಬೆಂಗಳೂರು, ಚೆನೈ, ಬರೋಡಾ, ಮಂಡ್ಯ, ಬುಕ್ಕಸಾಗರ, ಬೈಲುವದ್ದಿಗೇರಿ , ಬಿಜಾಪುರ, ಬಾದಾಮಿ ಭಾಗದ 20 ಜನ ನುರಿತ ಕಲಾವಿದರು ಶಿಬಿರದಲ್ಲಿ ಭಾಗವಹಿಸಿದ್ದಾರೆ ಎಂದು ಶಿಬಿರದ ಆಯೋಜಕ ಮೋಹನ್ರಾವ್ ಪಾಂಚಾಳ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಎಸ್ಪಿ ಶ್ರೀಹರಿ ಬಾಬು, ಉಪವಿಭಾಗಾಧಿಕಾರಿ ಹಾಗೂ ಹಂಪಿ ವಿಶ್ವಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಸಿದ್ಧರಾಮೇಶ್ವರ, ಹೊಸಪೇಟೆ ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ಹಂಪಿ ಗ್ರಾಮಪಂಚಾಯಿತಿ ಸದಸ್ಯೆ ಸ್ವಾತಿಸಿಂಗ್ ಸೇರಿದಂತೆ ಇತರರು ಇದ್ದರು.