ಹೊಸದಿಗಂತ ವರದಿ ವಿಜಯನಗರ:
ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2, 3, 4 ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದಾರೆ. ಮೊದಲ ದಿನ ಉತ್ಸವವನ್ನು ಸಿಎಂ ಉದ್ಘಾಟನೆ ಮಾಡಲಿದ್ದಾರೆ. ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆ ಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲಾಗುವುದು.
ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲೇ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .