ಹೊಸದಿಗಂತ, ಹಾವೇರಿ:
ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ಆಯುಕ್ತ ಅಂಶುಕುಮಾರ್ ಅವರು ಹಾನಗಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀಧರ ಮತ್ತು ಕಾನ್ಸ್ಟೆಬಲ್ ಇಲಿಯಾಸ್ ಶೇರ್ನದಿ ಅವರನ್ನು ಅಮಾನತುಗೊಳಿಸಿದ್ದಾರೆ.
ಈ ಪ್ರಕರಣದ ತನಿಖೆಯ ವೇಳೆ ಕರ್ತವ್ಯ ನಿರ್ಲಕ್ಷ್ಯದ ಪ್ರಮುಖ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಎಸ್ಪಿ ಅಂಶುಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಎಸ್ಪಿ ಸಿ.ಗೋಪಾಲ್ ತಿಳಿಸಿದ್ದಾರೆ.