ಬಜರಂಗದಳ ಬ್ಯಾನ್ ಮಾಡಿದರೆ ಹನುಮ ಭಕ್ತರು ನಿಮ್ಮ ಸರ್ಕಾರವನ್ನೇ ಬೇರು ಸಮೇತ ಕಿತ್ತೊಗೆಯುತ್ತಾರೆ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಹುಬ್ಬಳ್ಳಿ:

ಬಜರಂಗದಳ ಬ್ಯಾನ್ ಮಾಡಿದರೆ ಹನುಮ ಭಕ್ತರು ನಿಮ್ಮ ಸರ್ಕಾರ ಹಾಗೂ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ನವಲಗುಂದ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ಅವರ ಪರವಾಗಿ ಮತಯಾಚನೆ ಹಾಗೂ ರೋಡ್ ಶೋ ನಡೆಸಿ ಬಳಿಕ ಮಾತನಾಡಿದ ಅವರು, ಬಿಜೆಪಿ ಕೇಂದ್ರ ಸರ್ಕಾರ ದೇಶದ್ರೋಹಿ ಪಿ.ಎಫ್.ಐ ಬ್ಯಾನ್ ಮಾಡಿದ್ದಾರೆ.‌ ಆದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಈ ದೇಶದ ಇತಿಹಾಸ, ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳಸುವ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಘೋಷಿಸಿದ್ದಾರೆ ಎಂದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಕಾಂಗ್ರೆಸ್ ನವರಿಗೆ ಧಮ್ಮು ತಾಕತ್ತಿದ್ದರೆ ಬಜರಂಗದಳ ಬ್ಯಾನ್ ಮಾಡಲಿ ನೋಡೋಣ. ಡಿ.ಕೆ.ಶಿವಕುಮಾರ ನನ್ನ ನಾಲಿಗೆ ಕತ್ತರಿಸುತ್ತೇನೆ ಎಂದು ಹೇಳಿದ್ದಾರೆ. ಅವರಿಗೆ ಗಂಡಸ್ತನ ಇದ್ದರೆ ಬ್ಲೇಡ್ ತೆಗೆದು ನೋಡಲಿ ಎಂದು ಸವಾಲು ಹಾಕಿದರು. ಕೇಂದ್ರ ಹಾಗೂ ರಾಜ್ಯ ಸರಕಾರ ಮರಾಠ, ಲಿಂಗಾಯತ ಸೇರಿದಂತೆ ಎಲ್ಲಾ ಸಮಾಜಗಳಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಆದರೆ ಈ ಮೀಸಲಾತಿಯನ್ನು ಕಿತ್ತುಹಾಕುವ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತೀರಾ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!