ಹಣಮಂತ ನಿರಾಣಿಗೆ 34 ಸಾವಿರ ಮತ ಅಂತರದ ಭರ್ಜರಿ ಗೆಲುವು: ಮುರುಗೇಶ್ ನಿರಾಣಿ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಎರಡನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 34,693 ಮತಗಳ ಅಂತರದಿಂದ ಅಮೋಘ ಜಯ ಗಳಿಸಿದ್ದಾರೆ.
ಭರ್ಜರಿ ಗೆಲುವಿಗೆ ಕಾರಣೀಭೂತರಾದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅಭಿನಂದನೆ ಸಲ್ಲಿಸಿದ್ದಾರೆ.
ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ಹಾಗೂ ಸಹೋದರ ಹಣಮಂತ ನಿರಾಣಿ ಅವರಿಗೆ ಅಭಿನಂದನೆಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ ಎಂದು ಸಚಿವ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕರ್ತರ ಅವಿರತ ಪರಿಶ್ರಮಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು, ಶಾಸಕರು ಮತ್ತು ಎಲ್ಲಾ ನಾಯಕರಿಗೆ ನನ್ನ ಪ್ರಣಾಮಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಚುನಾವಣೆ ಫಲಿತಾಂಶವು ಜನಪರ ಆಡಳಿತಕ್ಕೆ ಸಂದ ಯಶಸ್ಸು. ಸರ್ಕಾರದ ಕಾರ್ಯಕ್ರಮಗಳಿಗೆ, ಪಕ್ಷದ ಸಂಘಟಿತ ಚುನಾವಣಾ ಹೋರಾಟಕ್ಕೆ ಸಿಕ್ಕ ಮನ್ನಣೆಯೆಂದು ಬಣ್ಣಿಸಿದ್ದಾರೆ. ಈ ಫಲಿತಾಂಶ 2023ರ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಸಚಿವ ನಿರಾಣಿ ಭವಿಷ್ಯ ನುಡಿದಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!