ಹರ್ ಘರ್ ತಿರಂಗಾ ಸೈಕಲ್ ಜಾಥಾಕ್ಕೆ ಡಿಸಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಚಾಲನೆ

ಹೊಸದಿಗಂತ ವರದಿ ವಿಜಯಪುರ:
ನಗರದಲ್ಲಿ ಹರ್ ಘರ್ ತಿರಂಗಾ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಶನಿವಾರ ಬೆಳಗ್ಗೆ ಚಾಲನೆ ನೀಡಿದರು.

ಇಲ್ಲಿನ ಮಹಾನಗರ ಪಾಲಿಕೆ ಆವರಣದಿಂದ ಸೈಕಲ್ ಜಾಥಾ ಆರಂಭಗೊಂಡು, ಜಲನಗರ, ಬಸವೇಶ್ವರ ವೃತ್ತ, ಗಾಂಧಿ ವೃತ್ತ ಸೇರಿದಂತೆ ನಗರಾದ್ಯಂತ ಸಂಚರಿಸಿ, ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ ಎಂದು ಕೋರಲಾಯಿತು. ಜಾಥಾಯುದ್ದಕ್ಕೂ ಭಾರತ ಮಾತೆಯ ಜೈಘೋಷ ಮೊಳಗಿತು.

ಈ ಸಂದರ್ಭ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂದೆ ಸೇರಿದಂತೆ ಹಲವು ಗಣ್ಯರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!