ಅರ್ಜಿದಾರರಿಗೆ ತರಾಟೆ: ಹಿಜಾಬ್ ಅರ್ಜಿ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಇದರ ವಿಚಾರಣೆ ಇಂದು ನಡೆಸಿದ ಕೋರ್ಟ್ ಮುಸ್ಲಿಂ ಅರ್ಜಿದಾರರನ್ನುತರಾಟೆಗೆ ತೆಗೆದುಕೊಂಡಿದೆ.

ಇನ್ನು ಅರ್ಜಿದಾರರ ಪರ ವಕೀಲರು ಕೋರ್ಟ್‌ಗೆ ಪ್ರಕರಣವನ್ನು ಮುಂದೂಡುವಂತೆ ಮನವಿ ಮಾಡಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪೀಠ, ಸೆ. 5ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು , ಈ ಪ್ರಕರಣದಲ್ಲಿ ಅರ್ಜಿದಾರರು ತುರ್ತು ವಿಚಾರಣೆಯನ್ನು ಕೋರಿದ್ದಾರೆ. ಹಾಗಾಗಿ ತೀರಾ ದೂರದವರೆಗೆ ಮುಂದೂಡಿಕೆ ವರದಿಯನ್ನು ಕೋರ್ಟ್‌ ಸ್ವೀಕರಿಸುವುದಿಲ್ಲ. ಸೆ. 5 ರಿಂದ ಇದರ ವಿಚಾರಣೆಯನ್ನು ಆರಂಭಿಸಲಿದ್ದೇವೆ. ಅದಲ್ಲದೆ, ಸುಪ್ರೀಂ ಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಆ ಮೂಲಕ ಈ ವಿಷಯದಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿದೆ.

ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಈ ವರ್ಷದ ಜನವರಿಯಲ್ಲಿ ಹಿಜಾಬ್‌ ವಿವಾದ ಆರಂಭವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!