ಹಗಲು ರಾತ್ರಿ ಶ್ರಮಿಸುವಂತೆ KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳ ಕಿರುಕುಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರ ಸಬಲೀಕರಣಕ್ಕಾಗಿ, ರಾಜ್ಯ ಸರ್ಕಾರ ಶಕ್ತಿ ಯೋಜನೆ ಪರಿಚಯಿಸಿದೆ. ಆದರೆ, ಶಕ್ತಿ ಯೋಜನೆಗಾಗಿ ಹಗಲಿರುಳು ದುಡಿಯುವ ಕೆಎಸ್‌ಆರ್‌ಟಿಸಿ ಮಹಿಳಾ ಕಂಡಕ್ಟರ್​ಗಳಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

ದೀಪಾಂಜಲಿ ನಗರದ KSRTC ಡಿಪೋ 5ರ ಕಂಡಕ್ಟರ್ ಮಂಜಮ್ಮ ತಮ್ಮ ಋತುಚಕ್ರದ ಸಮಸ್ಯೆಗಳ ನಡುವೆಯೂ ಅಧಿಕಾರಿಗಳು ಕೆಲಸ ಮಾಡಿ ಅಂತಾರೆ, ಎಂದು ತಮ್ಮ ನೋವನ್ನು ವಿಡಿಯೋ ಮೂಲಕ ತಿಳಿಸಿ ಕಣ್ಣೀರಿಟ್ಟಿದ್ದಾರೆ.

ಸಿಟಿಎಂ ಅಂತೋಣಿ ಜಾರ್ಜ್ ಅವರ ಬಳಿ ಹೋಗಿ ಅಧಿಕಾರಿಗಳು ಹೀಗೆ ಹಿಂಸೆ ನೀಡುತ್ತಿದ್ದಾರೆ ಎಂದು ಹೇಳಿದರೆ ಬಹಳ ಕಟುವಾದ ಮಾತುಗಳನ್ನು ಆಡುತ್ತಾರೆ ಎಂದು ಮಹಿಳಾ ಕಂಡಕ್ಟರ್ ಹೇಳಿದ್ದಾರೆ.

ಇನ್ನು ಅಧಿಕಾರಿಗಳ ಚಿತ್ರಹಿಂಸೆ ಕುರಿತು ಮಂಜಮ್ಮ ಅವರು ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಡಿ ಅವರಿಗೆ ದೀಪಾಂಜಲಿ ನಗರದ ಡಿಪೋ 5ರ 44 ಜನರ ಸಹಿ ಹಾಕಿ ಈ ಸಮಸ್ಯೆಯ ಕುರಿತು ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!