ಶ್ರೀ ಕೃಷ್ಣಮಠದಲ್ಲಿ ಹರಿಶಯನೀ ಏಕಾದಶಿ: ಭಕ್ತಿ ಭಾವದಿಂದ ತಪ್ತ ಮುದ್ರಾಧಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಶ್ರೀ ಕೃಷ್ಣಮಠದಲ್ಲಿ ಹರಿಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.
ನಂತರ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು. ಜೊತೆಗೆ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!