ಹೊಸ ವರ್ಷಾಚರಣೆ ನೆಪದಲ್ಲಿ ಶಾಂತಿ ಕದಡಿದರೆ ಕಠಿಣ ಕ್ರಮ: ಉಡುಪಿ ಎಸ್ಪಿ ಖಡಕ್ ಎಚ್ಚರಿಕೆ

ಹೊಸದಿಗಂತ ವರದಿ, ಮಂಗಳೂರು:
ಕ್ಯಾಲೆಂಡರ್ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದೆಗೆಡದಂತೆ ನೋಡಿಕೊಳ್ಳಲು ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದ್ದು, ನಾಗರಿಕರಿಗೆ ಕೆಲವೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.

  1. ಡಿ. 31 ರ ಮಧ್ಯರಾತ್ರಿ 12.30ರ ಒಳಗೆ ಎಲ್ಲಾ ರೀತಿಯ ಹೊಸ ವರ್ಷಾಚರಣೆಯ ಕಾರ್ಯಕ್ರಮ ಮುಕ್ತಾಯವಾಗಬೇಕು.
  2. ಪಬ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮುಂತಾದ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನೋಡಿಕೊಳ್ಳಬೇಕು.
  3. ಹೋಟೆಲ್, ಪಬ್, ರೆಸ್ಟೋರೆಂಟ್, ಹೋಮ್ ಸ್ಟೇ, ಪಿಜಿಗಳಲ್ಲಿ ಸಾರ್ವಜನಿಕರಿಗೆ ಈವೆಂಟ್‌ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡತಕ್ಕದ್ದು.
  4. ಕಾರ್ಯಕ್ರಮಗಳ ಆಯೋಜಕರು, ಭದ್ರತಾ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸ್ವಯಂಸೇವಕರು, ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು.
  5. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥಾವ ಮದ್ಯದ ನಶೆಯಲ್ಲಿ ಆಚರಣೆ ಮಾಡಿದಲ್ಲಿ ಕಠಿಣ ಕ್ರಮ.
  6. ಬಸ್ ಸ್ಟಾಂಡ್, ಸಮುದ್ರ ತೀರ, ರಸ್ತೆ ಫುಟ್ ಪಾತ್, ಗಾರ್ಡನ್ ಮತ್ತು ಇತರೇ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.

ನಾಗರಿಕರು ಈ ನಿಯಮಗಳನ್ನು ಪಾಲಿಸಬೇಕು. ಕಾನೂನು ಉಲ್ಲಂಘಿಸಿ ಶಾಂತಿ ಕದಡುವ ಯಾವುದೇ ಪ್ರಯತ್ನ ನಡೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ ಪಿ ಡಾಕ್ಟರ್ ಅರುಣ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!