ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧನಗರದಲ್ಲಿ ಶುಕ್ರವಾರದವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದ್ದು, ಫೆ.25ರವರೆಗೆ ಶಾಲಾ ಕಾಲೇಜುಗಳಿಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಗರದಲ್ಲಿ ಫೆಬ್ರವರಿ 25ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಶುಕ್ರವಾರದವರೆಗೆ ರಜೆಯನ್ನು ವಿಸ್ತರಿಸಲಾಗಿದೆ. ಅಗತ್ಯ ವಸ್ತು ಖರೀದಿಸೋದಕ್ಕೆ ಬೆಳಿಗ್ಗೆ 6 ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದರು.