ಹೊಸದಿಗಂತ ಆನ್ಲೈನ್ ಡೆಸ್ಕ್:
ಭಾನುವಾರ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಂತಿಮ ಯಾತ್ರೆಯ ಸಂದರ್ಭ ಕೆ. ಆರ್. ಪುರಂನ ಸಿದ್ಧಯ್ಯ ರಸ್ತೆಯಲ್ಲಿ ಗುಂಪೊಂದು ಕಲ್ಲು ತೂರಾಟ ನಡೆಸಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.
ಅತ್ತ ಹರ್ಷ ಅವರ ಅಂತಿಮ ಯಾತ್ರೆ ಸಾಗುತ್ತಿದ್ದರೆ ಇದೇ ಸಂದರ್ಭ ಗುಂಪು ಕಲ್ಲು ತೂರಾಟ, ಬೈಕ್ ಗಳಿಗೆ ಬೆಂಕಿ, ಕಾರುಗಳ ಗಾಜುಗಳನ್ನು ಪುಡಿಗಟ್ಟಿದ್ದು, ಪೊಲೀಸರು ಅಶ್ರುವಾಯು, ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.