ಹರಿಯಾಣ ಬಿಜೆಪಿ ವಕ್ತಾರ, ಕರ್ಣಿ ಸೇನಾ ಅಧ್ಯಕ್ಷ ಸೂರಜ್ ಪಾಲ್ ಅಮು ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ಷತ್ರಿಯ ಸಮುದಾಯವನ್ನು ಅವಮಾನಿಸಿದ ವ್ಯಕ್ತಿಗೆ ಬಿಜೆಪಿ ಲೋಕಸಭೆ ಅಭ್ಯರ್ಥಿ ಟಿಕೆಟ್ ನೀಡಿದೆ ಎಂದು ಆರೋಪಿಸಿ ಹರಿಯಾಣ ಬಿಜೆಪಿ ವಕ್ತಾರ ಮತ್ತು ಕರ್ಣಿ ಸೇನಾ ಅಧ್ಯಕ್ಷ ಸೂರಜ್ ಪಾಲ್ ಅಮು ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಗುಜರಾತ್‌ನ ರಾಜ್‌ಕೋಟ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿರುವ ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಅವರನ್ನು ಉಲ್ಲೇಖಿಸಿದ್ದಾರೆ. ಗುರುವಾರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಪಕ್ಷವು ರಜಪೂತ ನಾಯಕರನ್ನು ಬದಿಗಿಟ್ಟಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಕ್ಷದಲ್ಲಿ 2014ರಿಂದ ಬಿಜೆಪಿಯಲ್ಲಿ ನಾಯಕತ್ವ ಸ್ಥಾನದಲ್ಲಿರುವ ಕ್ಷತ್ರಿಯ ಸಮುದಾಯದ ಪ್ರಾತಿನಿಧ್ಯವೂ ನಿರಂತರವಾಗಿ ಕಡಿಮೆಯಾಗುತ್ತಿದೆ. ಸಮುದಾಯದ ಪ್ರಮುಖರನ್ನೂ ಪಕ್ಷದಿಂದ ದೂರವಿಡಲಾಗುತ್ತಿದೆ. ನಾಚಿಕೆಗೇಡಿನ ಹೇಳಿಕೆಗಳನ್ನು ನೀಡಿದ ವ್ಯಕ್ತಿ, ಅನೈತಿಕ ವರ್ತನೆಯ ಅಭ್ಯರ್ಥಿಗೆ ಪ್ರೋತ್ಸಾಹ ನೀಡಿದೆ ಎಂದು ಅವರ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!