ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮೇಶ್ವರಂ ಕೆಫೆ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಸಕ್ಸಸ್ ಕಂಡಿದೆ, ಒಂದು ಬ್ರ್ಯಾಂಚ್ನಿಂದ ಆರಂಭವಾಗಿ ಎರಡು ಮೂರು ಬ್ರ್ಯಾಂಚ್ ಆರಂಭವಾಗಿದೆ. ಹೀಗಾಗಿ ದ್ವೇಷದಿಂದಲೂ ಯಾರಾದರೂ ಈ ರೀತಿ ಮಾಡಿರುವ ಸಾಧ್ಯತೆಯೂ ಇದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಸಾಕಷ್ಟು ಸುಳಿವು ಸಿಕ್ಕಿದ್ದು, ಬ್ಯಾಗ್ ಇಟ್ಟುಹೋದವನ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಬಸ್ನಲ್ಲಿ ಬಂದಿದ್ದಾನೆ. ಬಸ್ನಲ್ಲಿ ಸಿಸಿ ಕ್ಯಾಮೆರಾಗಳಿವೆ. ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ ಎಂದಿದ್ದಾರೆ.