ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ವಿ. ಸೋಮಣ್ಣ ಪಕ್ಷ ಬಿಡುತ್ತಿದ್ದಾರೆ ಎನ್ನುವ ಊಹಾಪೋಹಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರೆ ಎಳೆದಿದ್ದಾರೆ. ಸಚಿವ ವಿ. ಸೋಮಣ್ಣ ನಮ್ಮ ಜೊತೆಯೇ ಇದ್ದಾರೆ. ಮುಂದೆಯೂ ಇರುತ್ತಾರೆ, ಊಹಾಪೋಹಗಳಿಗೆ ಕಿವಿಕೊಡಬೇಡಿ. ಕೆಲವರು ಕ್ರೆಡಿಟ್ಗಾಗಿ ಏನೇನೋ ಮಾತನಾಡುತ್ತಾರೆ ಅಷ್ಟೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಕೆಲವು ದಿನಗಳಿಂದ ಸೋಮಣ್ಣ ಪಕ್ಷ ಬಿಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ, ಆದರೆ ಇದು ಆಧಾರರಹಿತ ಮಾತುಗಳು, ಸೋಮಣ್ಣ ನಮ್ಮ ಜತೆಯೇ ಇದ್ದಾರೆ ಎಂದು ಹೇಳಿದ್ದಾರೆ.