ದಿಗಂತ ವರದಿ ಹಾಸನ :
ಹಾಸನ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ಪಟೇಲ್ ಗೃಹಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದರು.
ಶ್ರೇಯಸ್ಪಟೇಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿ, ನಗರದ ಡೇರಿ ವೃತ್ತದಿಂದ ಬೃಹತ್ ರೋಡ್ ಶೋ ನಡೆಸಿದರು.
ಮೆರವಣಿಗೆಯಲ್ಲಿ ಭಾಗಿಯಾಗಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಮುಖಂಡರು ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.
ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ಪಟೇಲ್ ಡಿಸಿಎಂ ಡಿಕೆ ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.