ಹಾಸನದ ಆರ್.ಟಿ. ಓ ಕಚೇರಿಗೆ ಮಾಜಿ ಸಚಿವ ರೇವಣ್ಣ ಭೇಟಿ: ಅಧಿಕಾರಿಗಳಿಗೆ ಕ್ಲಾಸ್

ಹೊಸ ದಿಗಂತ ವರದಿ, ಹಾಸನ:

ನಗರದ ಹೋರ ವಲಯದಲ್ಲಿರುವ ಆರ್.ಟಿ. ಒ ಕಚೇರಿಗೆ ಮಾಜಿ ಸಚಿವ ರೇವಣ್ಣ ಭೇಟಿ ನೀಡಿ ಆರ್.ಟಿ.ಒ ರಾಜ್ ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಅರ್ಜಿ ಸಲ್ಲಿಸಿದ ಎಲ್ಲಾ ಕಡತಗಳನ್ನು ಬಾಕಿ ಉಳಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಡತಗಳನ್ನು ಹೋರ ತೆಗೆಸಿ ಆರ್.ಟಿ. ಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕಚೇರಿಯಲ್ಲೇ ಸಾರಿಗೆ ಸಚಿವರಿಗೆ ಕರೆ ಮಾಡಿ ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಿಳಿಸಿ. ಅವುಗಳಿಗೆ ಕಡಿವಾಣ ಹಾಕಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರು ಹಾಗೂ ಕಾರ್ಯದರ್ಶಿಗಳು ಸ್ಥಳಕ್ಕೆ ಬರುವವರೆಗೂ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಪೆಂಡಿಂಗ್ ಇಟ್ಟಿರುವ ಎಲ್ಲಾ ಕಡತ ಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಸಾರ್ವಜನಿಕರಿಗೆ ಸ್ಪಂದಿಸಬೇಕು ರೈತರು, ಬಡವರು ಬಂದಾಗ ಅವರನ್ನು ಕಾಯಿಸದೆ ಬೇಗ ಕೆಲಸ ಮಾಡಿಕೊಟ್ಟು ಅವರಿಗೆ ನೆರವಾಗಬೇಕು ಇಲ್ಲವಾದರೆ ಸ್ಥಳೀಯ ಶಾಸಕರು ಹಾಗೂ ತನ್ನ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್, ನಗರಸಭೆ ಅಧ್ಯಕ್ಷ ಚಂದ್ರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!