ತನಿಖಾಧಿಕಾರಿಗಳ ಹತ್ಯೆಗೆ ಸಂಚು ಪ್ರಕರಣ: ನಟ ದಿಲೀಪ್ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತನ್ನ ಮೇಲೆ ದಾಖಲಿಸಿರುವ ಕೊಲೆ ಸಂಚು ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ನಟ ದಿಲೀಪ್ ಸಲ್ಲಿಸಿದ್ದ ಮೇಲ್ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
2017ರಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಹತ್ಯೆಗೈಯುವ ಸಂಚು ರೂಪಿಸಿರುವುದಾಗಿ ಆರೋಪಿಸಿ ಜನವರಿ 9ರಂದು ಕ್ರೈಬ್ರ್ಯಾಂಚ್ ಪೊಲೀಸರು ನಟ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಈ ಕುರಿತು ದಿಲೀಪ್ ಆಡಿಯೋ ಕ್ಲಿಪ್ ನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಕಳೆದ ವಾರ ನಟ ದಿಲೀಪ್ ಜಾಮೀನನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದ್ದರು.
2017ರಲ್ಲಿ ನಡೆದ ಪ್ರಕರಣದಲ್ಲಿ ನಟ ದಿಲೀಪ್ ಎಂಟನೇ ಆರೋಪಿಯಾಗಿದ್ದಾನೆ. ಪ್ರಕರಣದಲ್ಲಿ ದಿಲೀಪ್ ಮಾಜಿ ಪತ್ನಿ ಮಂಜು ವಾರಿಯರ್ ಅನ್ನು ಕ್ರೈಬ್ರ್ಯಾಂಚ್ ಪೊಲೀಸರು ತನಿಖೆಗೊಳಪಡಿಸಿದ್ದು, ಆಕೆ ಕೂಡಾ ದಿಲೀಪ್ ಹಾಗೂ ಇತರ ಇಬ್ಬರು ಆರೋಪಿಗಳ ಧ್ವನಿಯ ಗುರುತು ಪತ್ತೆಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!