ಆದಿಚುಂಚನಗಿರಿ ಕಾಲಭೈರವೇಶ್ವರ ಸ್ವಾಮಿಗೆ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇಂದು ಮಂಡ್ಯದ ಆದಿಚುಂಚನಗಿರಿಗೆ ತೆರಳಿದ ಹೆಚ್.ಡಿ.ಕುಮಾರಸ್ವಾಮಿ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪೂರ್ಣಕುಂಭ ಹಾಗೂ ಮಂಗಳವಾದ್ಯಗಳ ಮೂಲಕ ಸ್ವಾಗತಿಸಲಾಯಿತು. ನಂತರ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಅವರು ಮಠಕ್ಕೆ ತೆರಳಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಗಳು ಕುಮಾರಸ್ವಾಮಿ ಅವರನ್ನು ಅಭಿನಂದಿಸಿ ಆರೋಗ್ಯವಾಗಿರಲಿ ಎಂದು ಹಾರೈಸಿದರು. ಪುಟ್ಟರಾಜು, ಮಾಜಿ ಸಚಿವ ಸುರೇಶ್ ಗೌಡ ಹಾಗೂ ಜೆಡಿಎಸ್ ಬಿಜೆಪಿ ಮುಖಂಡರು ಕುಮಾರಸ್ವಾಮಿ ಜೊತೆ ಸಾಥ್ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!